ಉಡುಪಿ: ಡಿ.ಕೆ.ಶಿವಕುಮಾರ್ ಅವರು ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಪ್ರತಿಜ್ಞಾ ಸ್ವೀಕಾರ ಮಾಡುವ ಸಂದರ್ಭದಲ್ಲಿ ಕರಾವಳಿಯಲ್ಲಿ ಈ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ‘ಹಸಿರು ಬೆಳೆಸಿ ಉಳಿಸುವ ಪ್ರತಿಜ್ಞೆ’ ನಡೆಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಮುಂದಾಗಿದ್ದಾರೆ.
ಪ್ರತಿಜ್ಞಾ ಸ್ವೀಕಾರದ ನೆನಪು ನೂರ್ಕಾಲ ಉಳಿಯಬೇಕು ಎನ್ನುವ ಉದ್ದೇಶದಿಂದ ಹಸಿರು ಪ್ರತಿಜ್ಞೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಅದನ್ನು ಪೋಷಿಸುವ ಮುಖಾಂತರ ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಶುಭ ಹಾರೈಸಿದರು. ಈ ಹಸಿರು ಪ್ರತಿಜ್ಞಾ ಕಾರ್ಯವು ಜಿಲ್ಲಾದ್ಯಂತ ಮೂರು ತಿಂಗಳ ಕಾಲ ನಿರಂತರವಾಗಿ ನಡೆಯಲಿದೆ ಎಂದು ಕಿಶನ್ ಹೆಗ್ಡೆ ಕೊಳ್ಕೆಬೈಲು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಕೋಟ, ವಡ್ಡರ್ಸೆ, ಸಾಯಬ್ರಕಟ್ಟೆ, ಶಿರಿಯಾರ, ಯಡ್ತಾಡಿ, ಬಿಲ್ಲಾಡಿ ಗ್ರಾಮಪಂಚಾಯತ್ ಸೇರಿದಂತೆ ಜಿಲ್ಲೆಯ ವಿವಿದೆಡೆ ಇಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿಗಳು ಗಿಡ ನೆಡುವ ಮೂಲಕ ಹಸಿರು ಪ್ರತಿಜ್ಞಾ ಕಾರ್ಯದಲ್ಲಿ ಭಾಗಿಯಾದರು.
Comments are closed.