ಕುಂದಾಪುರ: ಇಸ್ಪಿಟ್ ಜುಗಾರಿಯಲ್ಲಿ ನಿರತರಾಗಿದ್ದ ಏಳು ಮಂದಿ ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗಂಗೊಳ್ಳಿ ಗ್ರಾಮದ ಗಂಗೊಳ್ಳಿ ಪೇಟೆಯ ಫೆರಿರೋಡ್ ನಲ್ಲಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಪುರುಷೋತ್ತಮ ಖಾರ್ವಿ(42), ದಿನೇಶ್(42), ವಿನೋದ(43), ಮಹೇಶ್ ಖಾರ್ವಿ(28), ಕೃಷ್ಣ(36 ), ನಾಗರಾಜ ಖಾರ್ವಿ(44), ಸಂದೇಶ್(31) ಬಂಧಿತರು.
ಶುಕ್ರವಾರ ಸಂಜೆ ಗಂಗೊಳ್ಳಿ ಗ್ರಾಮದ ಗಂಗೊಳ್ಳಿ ಪೇಟೆಯ ಫೆರಿರೋಡ್ ನಲ್ಲಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಗಂಗೊಳ್ಳಿ ಠಾಣಾ ಪಿ.ಎಸ್.ಐ ಭೀಮಾಶಂಕರ್ ಸಿನ್ನೂರ ಸಂಗಣ್ಣ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ 7 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಉಪಯೋಗಿಸಿದ 1360/-ರೂ ವಶಕ್ಕೆ ಪಡೆಯಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.