ಕರಾವಳಿ

ಬ್ರಹ್ಮಾವರ: ಕಾರು ಡಿಕ್ಕಿಯಾಗಿ 21 ವರ್ಷದ ಯುವಕ ದಾರುಣ ಸಾವು

Pinterest LinkedIn Tumblr

ಉಡುಪಿ: ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಸಮೀಪ ಗೆಳೆಯನೊಂದಿಗೆ ಮಾತನಾಡುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಸೋಮವಾರ ಕುಂಬ್ರಗೋಡು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಕುಂಬ್ರಗೋಡು ನಿವಾಸಿ ಆಕಾಶ್ ಪೂಜಾರಿ (21) ಎಂದು ಗುರುತಿಸಲಾಗಿದ್ದು ಈತ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

ಕುಂದಾಪುರ-ಉಡುಪಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತು ಆಕಾಶ್ ಮತ್ತು ಆತನ ಸ್ನೇಹಿತ ಶರತ್ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಗುದ್ದಿ ಪಲ್ಟಿ ಹೊಡೆದಿದ್ದು ಆಕಾಶ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಶರತ್‌ನನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕಾಶ್‌ ಅವರನ್ನು ಕೂಡಾ ಆಸ್ಪತ್ರೆಗೆ ಕರೆತರಲಾಯಿತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.