ಕರಾವಳಿ

ಗಾಂಜಾ ಸೇವನೆ: ಕುಂದಾಪುರ ಗ್ರಾಮಾಂತರ ಪೊಲೀಸರಿಂದ ಇಬ್ಬರ ಬಂಧನ

Pinterest LinkedIn Tumblr

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಾಂಕಾ ಸೇವಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಅಶ್ವಥ್ ಹಾಗೂ ಪ್ರಸಾದ್ ಎನ್ನುವ ಯುವಕರು ಬಂಧಿತ ಆರೋಪಿಗಳು.

ಗ್ರಾಮಾಂತರ ಠಾಣೆ ಪಿಎಸ್ಐ ರಾಜಕುಮಾರ್ ರಾತ್ರಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಹಟ್ಟಿಯಂಗಡಿ ಗ್ರಾಮದ ಕರ್ಕಿಗುಡ್ಡೆ ಎಂಬ ಸಾರ್ವಜನಿಕ ಸ್ಥಳದಲ್ಲಿ ಗಾಂಜ ಸೇವನೆ ಬಗ್ಗೆ ಬಂದ ಮಾಹಿತಿಯಂತೆ ಯುವಕರನ್ನಹ ವಿಚಾರಿಸಿ ವಶಕ್ಕೆ ಪಡೆದು ತಜ್ಞರ ಪರೀಕ್ಷೆಯ ಬಗ್ಗೆ ಮಣಿಪಾಲ ಕೆ.ಎಂ,ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ತಜ್ಞರ ಮುಂದೆ ಹಾಜರಿಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.