ಕರಾವಳಿ

ವಿಪರೀತ ಗಾಳಿ ಮಳೆ: ಬೈಂದೂರು ಸುಮನಾವತಿ ನದಿಗೆ ಬಿದ್ದು ಯುವಕ ಸಾವು

Pinterest LinkedIn Tumblr

ಕುಂದಾಪುರ: ಬೈಂದೂರಿನ ಸುಮನಾವತಿ ನದಿ ದಡದಲ್ಲಿ ನಡೆದುಕೊಂಡು ಮನೆಗೆ ವಾಪಾಸ್‌ ಆಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಿವರಾಜ (27) ಎಂದು ಗುರುತಿಸಲಾಗಿದೆ.

ಶಿವರಾಜ ಅವರು ಸೆ. 13 ರಂದು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ವಾಪಾಸ್‌ ಬಂದಿರಲಿಲ್ಲ. ಸತತ ಹುಡುಕಾಟದ ಬಳಿಕ ಉಪ್ಪುಂದ ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿ ನದಿಯಲ್ಲಿ ಮೃತ ದೇಹ ಸಿಕ್ಕಿದೆ.

ಅವರು ಸುಮನಾವತಿ ನದಿ ದಡದಲ್ಲಿ ಮನೆಗೆ ನಡೆದುಕೊಂಡು ವಾಪಾಸ್‌ ಬರುತ್ತಿದ್ದ ವೇಳೆ ವಿಪರೀತ ಗಾಳಿ ಹಾಗೂ ಮಳೆಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.