ಕರಾವಳಿ

ಉಡುಪಿಯಲ್ಲಿ ಬೈಕ್ ಸವಾರನ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ?

Pinterest LinkedIn Tumblr

ಉಡುಪಿ: ದ್ವಿಚಕ್ರ ವಾಹನ ಸವಾರನಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ದುಷ್ಕರ್ಮಿಗಳ ತಂಡ ಹಣ ಮತ್ತು ಮೊಬೈಲ್ ಫೋನ್ ದೋಚಿದ ಘಟನೆ ಶನಿವಾರ ಮುಂಜಾನೆ 4.30 ರ ಸುಮಾರಿಗೆ ಉಡುಪಿ ಇಂದ್ರಾಳಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

 

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಉದ್ಯೋಗಿಯಾಗಿರುವ ದ್ವಿ ಚಕ್ರ ವಾಹನ ಸವಾರನೊಬ್ಬ ರೈಲ್ವೆ ನಿಲ್ದಾಣದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರನ್ನು ತಡೆದು ಹಲ್ಲೆ ನಡೆಸಿ 19 ಸಾವಿರ ರೂ ನಗದು ಹಾಗೂ ಮೊಬೈಲ್ ಫೋನ್ ದೋಚಿದ್ದಾರೆ. ಈ ಘಟನೆಯ ಸಂದರ್ಭ ಅವರ ಎದೆಗೆ ಗಾಯವಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

ಮಣಿಪಾಲ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಭೇಟಿ‌ನೀಡಿದ್ದು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಣಿಪಾಲ ವ್ಯಾಪ್ತಿಯ ಮತ್ತೆರಡು ಕಡೆಗಳಲ್ಲಿ ಇದೇ ಮಾದರಿಯಲ್ಲಿ ದುಷ್ಕರ್ಮಿಗಳು ದರೋಡೆಗೆ ಮುಂದಾಗಿದ್ದು ತನಿಖೆ ಮುಂದುವರೆದಿದೆ.

Comments are closed.