ಕರಾವಳಿ

ಉಡುಪಿ ಜಿಲ್ಲೆಯ ಸುನ್ನಿ ಮುಖಂಡ ಸರ್ದಾರ್ ಗುಲ್ವಾಡಿ ನಿಧನ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆಯ ಸುನ್ನೀ ಮುಖಂಡ ಸರ್ದಾರ್ ಗುಲ್ವಾಡಿ(62) ಅಲ್ಪಕಾಲದ ಅಸೌಖ್ಯದಿಂದ ಇಂದು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಉಪಾಧ್ಯಕ್ಷ ರಾಗಿ, ಸುನ್ನೀ ಸಂಯುಕ್ತ ಜಮಾಅತ್ ಉಪಾಧ್ಯಕ್ಷರಾಗಿ, ಗುಲ್ವಾಡಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಗೂ ಗುಲ್ವಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ, ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು, ಉಪಾಧ್ಯಕ್ಷ ಮೆಕ್ಕಾಸ್ ಮನ್ಸೂರ್, ಕೋಶಾಧಿಕಾರಿ ಹಂಝ ಕರ್ಕಿ, ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಿಎಸ್ಎಫ್ ರಫೀಕ್, ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಹಾಜಿ ತೌಫಿಕ್ ಅಬ್ದುಲ್ಲಾ ನಾವುಂದ, ಇಲ್ಯಾಸ್ ನಾವುಂದ, ಅಬ್ದುಲ್ ಲತೀಫ್ ಫಾಳಿಲಿ ನಾವುಂದ, ವಕ್ಫ್ ಜಿಲ್ಲಾ ಸಲಹಾ ಮಂಡಳಿ ಅಧ್ಯಕ್ಷ ಹಾಜಿ ಕೆ.ಪಿ.ಇಬ್ರಾಹಿಂ ಮಟಪಾಡಿ, ಎಸ್ವೈಎಸ್ ಜಿಲ್ಲಾಧ್ಯಕ್ಷ ಹಾಜಿ ಮೊಯ್ದಿನ್ ಗುಡ್ವಿಲ್, ಕಾರ್ಯದರ್ಶಿ ಹಂಝತ್ ಹೆಜಮಾಡಿ, ಕೆಎಂಜೆ ಜಿಲ್ಲಾ ಕಾರ್ಯದರ್ಶಿ ವೈಬಿಸಿ ಬಶೀರ್ ಅಲಿ ಮೂಳೂರು, ಇಕ್ಬಾಲ್ ಜನ್ಸಾಲೆ, ಸುಬ್ಹಾನ್ ಅಹ್ಮದ್ ಹೊನ್ನಾಳ, ಅಬ್ದುಲ್ ಹಮೀದ್ ಅದ್ದು, ಕೆ.ಎಸ್.ಎಂ. ಮನ್ಸೂರ್ ದೊಡ್ಡಣಗುಡ್ಡೆ, ಅಬ್ದುಲ್ಲಾ ಸೂಪರ್ ಸ್ಟಾರ್ ಕಾಪು ಅಂತಿಮ ದರ್ಶನ ದಲ್ಲಿ ಪಾಲ್ಗೊಂಡಿದ್ದರು.

ಸಂತಾಪ: ಖಾಝಿ ಶೈಖುನಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್, ಎನ್.ಕೆ. ಎಂ.ಶಾಫಿ ಸಅದಿ ಬೆಂಗಳೂರು, ಅಬ್ದುರ್ರಹ್ಮಾನ್ ಮದನಿ ಮೂಳೂರು, ಅಶ್ರಫ್ ಸಖಾಫಿ ಕನ್ನಂಗಾರ್, ಯು.ಕೆ.ಮುಸ್ತಫ ಸಅದಿ ಸುನ್ನೀ ಸೆಂಟರ್, ಹಾಜಿ ಎಂ.ಎ. ಬಾವು ಮೂಳೂರು, ಅಶ್ರಫ್ ಅಂಜದಿ ಪಕ್ಷಿಕೆರೆ, ರವೂಫ್ ಖಾನ್ ಕುಂದಾ ಪುರ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಸಂತಾಪ ಸೂಚಿಸಿದ್ದಾರೆ.

Comments are closed.