ಉಡುಪಿ: ಜಿಲ್ಲೆಯಲ್ಲಿ ನಿಗಧಿಪಡಿಸಿರುವ 7 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 4 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ದುಷ್ಟ ಶಕ್ತಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಸುತ್ತಲೂ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ದಿನದಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ 200ಮೀ. ಸುತ್ತಲೂ ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.