ಕರಾವಳಿ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಳೆದುಕೊಂಡು ಪರಾರಿ..!

Pinterest LinkedIn Tumblr

ಉಡುಪಿ‌: ಉಡುಪಿ ಜಿಲ್ಲೆಯ ಕಾರ್ಕಳದ ಬಳಿ ಬೈಕ್ ನಲ್ಲಿ ಇಬ್ಬರು ಅಪರಿಚಿತರು ಬಂದು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾದ ಘಟನೆ ಎರ್ಲಪಾಡಿ ಗ್ರಾಮದ ಶಿವಬೆಟ್ಟು ಎಂಬಲ್ಲಿ ನಡೆದಿದೆ ಎನ್ನಲಾಗಿದೆ.

ಕಮಲ ನಾಯಕ್ ಎಂಬ ಮಹಿಳೆ ಸಾಲ್ಮರದ ಶಿವಬೆಟ್ಟು ಎಂಬಲ್ಲಿ ರಸ್ತೆಯಲ್ಲಿ ದನವನ್ನು ಮೇಯಲು ಕರೆದುಕೊಂಡು ಹೋಗುತ್ತಿರುವಾಗ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ 50 ಸಾವಿರ ಮೌಲ್ಯದ 2 ಪವನ್ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾರೆ.

ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments are closed.