ಉಡುಪಿ: ಬೈಕಿನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆಯವರು ಬಂಧಿಸಿದ ಘಟನೆ ಉಡುಪಿಯ ಕಾಪು ಎಂಬಲ್ಲಿ ನಡೆದಿದೆ.
(ಸಾಂದರ್ಭಿಕ ಚಿತ್ರ)
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನದಂತೆ, ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಸ್, ಉಡುಪಿ ಇವರ ನಿರ್ದೇಶನದ ಮೇರೆಗೆ ಉಡುಪಿ ವಲಯ-1 ರ ಅಬಕಾರಿ ನಿರೀಕ್ಷಕರು, ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಕಾಪು ತಾಲೂಕು ಯೆಣಗುಡ್ಡೆ ಗ್ರಾಮದ ಸಾವಿರಾಳು ದೂಮಾವತಿ ದೇವಸ್ಥಾನದ ಎದುರುಗಡೆ ಮ್ಯಾಕ್ಸ್ಗ್ಯಾರೇಜ್ನ ಹತ್ತಿರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದ್ವಿಚಕ್ರ ವಾಹನ ಸಂಖ್ಯೆ: ಏಂ 19 ಇಎ 3437 ಮಹೇಂದ್ರ ಬೈಕ್ನಲ್ಲಿ ಅಕ್ರಮವಾಗಿ 110 ಗ್ರಾಂ. ಗಾಂಜಾ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಅಕಿಲೇಶ್ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಉಡುಪಿ ವಲಯ-1 ರ ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.