ಕರಾವಳಿ

ಕಾರವಾರದಲ್ಲಿ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು: ಯುವತಿ ಸೇರಿ ಮೂವರು ಸಾವು

Pinterest LinkedIn Tumblr

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಳೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಡ್ನಮನೆ ಹೆಗ್ಗರಣಿ ಎಂಬಲ್ಲಿ ನಡೆದಿದೆ.

ಉಂಚಳ್ಳಿ ಜಲತಾಪಕ್ಕೆ ಪ್ರವಾಸಕ್ಕೆ ಹೋಗಿ ವಾಪಾಸ್ ಬರುತ್ತಿದ್ದ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಸೇರಿ ಒಟ್ಟು ಮೂವರು ಕಾರಿನ ಸಮೇತ ಹೊಳೆಗೆ ಬಿದ್ದು ಮೃತಪಟ್ಟಿದ್ದಾರೆ. ಬುಧವಾರ ಸಂಜೆಯ ವೇಳೆಗೆ ಘಟನೆ ಜರುಗಿದ್ದು, ಕಾರು ಹೊಳೆಗೆ ಬಿದ್ದ ಸಮಯದಲ್ಲಿ ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾರೂ ಕಾರನ್ನು ಗಮನಿಸಿಲ್ಲ. ಇದರಿಂದ ಗುರುವಾರ ಸಂಜೆ ಈ ಘಟನೆ ಬೆಳಕಿಗೆ ಬಂದಿದೆ.

ಕಾರು ಧಾರವಾಡದ ನೋಂದಣಿ ಸಂಖ್ಯೆಯಿದ್ದು, ಹುಬ್ಬಳ್ಳಿಯವರು ಎನ್ನಲಾಗಿದೆ. ಮೂವರೂ 25 ವರ್ಷದ ಒಳಗಿನವರಾಗಿದ್ದು, ಸಿದ್ದಾಪುರದ ಉಂಚಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಿಂದ ಹಿಂತಿರುಗಿ ಬರುವಾಗ ಕೋಡ್ನಗದ್ದೆ ಸಮೀಪದ ತಿರುವಿನಲ್ಲಿ ಆಯತಪ್ಪಿ ಕೋಡ್ನಗದ್ದೆ ಹೊಳೆಗೆ ಕಾರು ಬಿದ್ದಿದೆ.

Comments are closed.