ಕರಾವಳಿ

ಕೋವಿಡ್ ಸೋಂಕು ಹರಡದಂತೆ ಎಚ್ಚರ ವಹಿಸಿ: ಎಂ.ಮಹೇಶ್ವರ ರಾವ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು-ಹೆಚ್ಚು ಮಾಡುವುದರೊಂದಿಗೆ ಸೋಂಕಿತರನ್ನು ಪ್ರತ್ಯೇಕಿಸಿ ಸೋಂಕು ಹರಡದಂತೆ ಎಚ್ಚರ ವಹಿಸಬೇಕೆಂದು ಸರಕಾರದ ಕಾರ್ಯದರ್ಶಿ, ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಹೇಳಿದರು.

ಅವರು ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಕೋವಿಡ್-19 ಪ್ರಸ್ತುತ ಸ್ಥಿತಿ, ಪ್ರಕೃತಿ ವಿಕೋಪ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಳೆದ ಮಾರ್ಚ್ನಿಂದ ಜಿಲ್ಲಾಡಳಿತ ಸೇರಿದಂತೆ ಆರೋಗ್ಯ ಇಲಾಖೆ ಉತ್ತಮವಾಗಿ ಕರ‍್ಯನಿರ್ವಹಿಸುತ್ತಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕರ‍್ಯ ನಿರ್ವಹಿಸುವುದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮುಕ್ತಗೊಳಿಸಲು ಮುಂದಾಗಬೇಕೆAದು ತಿಳಿಸಿದರು.

ಈವರೆಗೆ 1.57 ಲಕ್ಷಕ್ಕೂ ಹೆಚ್ಚು ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 20,830 ಕೋವಿಡ್ ಪ್ರಕರಣಗಳಾಗಿವೆ. ಶೇ. 90.80 ರಷ್ಟು ಗುಣಮುಖ ಹೊಂದುತ್ತಿದ್ದಾರೆ. ಇವುಗಳಲ್ಲಿ ಶೇಕಡಾ 13 ರಷ್ಟು ಸೋಂಕಿನ ಲಕ್ಷಣಗಳು ಕಂಡು ಬಂದರೆ ಶೇಕಡಾ 87 ರಷ್ಟು ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ ಎಂದರು.

ಆರೋಗ್ಯ ಇಲಾಖೆ ಸ್ಥಳೀಯ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಸೀರೋ ಸರ್ವೇಲೆನ್ಸ್ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದ ಅವರು ಕೋವಿಡ್ ನಿಂದ ಮರಣ ಹೊಂದಿರುವವರು ಕೋವಿಡ್ ತೀವ್ರತೆ ಅಥವಾ ಇನ್ನಿತರ ಖಾಯಿಲೆಯಿಂದ ಮೃತಪಟ್ಟಿದ್ದಾರೆ ಎಂಬ ಬಗ್ಗ ಆಳವಾಗಿ ಪರೀಕ್ಷಿಸಿ ವರದಿ ಇಟ್ಟುಕೊಳ್ಳಬೇಕು ಎಂದರು.

ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ದಾಸ್ತಾನು ಹಾಗೂ ಸುರಕ್ಷತಾ ಪರಿಕರಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಮುಂದಿನ ದಿನಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಹಾಗೂ ಪರಿಕರಗಳನ್ನು ಸರಕಾರದಿಂದ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ 3682 ಗೃಹೋಪಯೋಗಿ ವಸ್ತುಗಳಿಗೆ , ಜಾನುವಾರು, ಮಳೆ ಹಾನಿ, ದನದ ಕೊಟ್ಟಿಗೆ ಹಾನಿ, ಮನೆಗಳ ಹಾನಿ ಮತ್ತಿತರೆ 5136 ಹಾನಿಗಳಾಗಿದ್ದು, 2068 ಪ್ರಕರಣಗಳಲ್ಲಿ 2.72 ಕೋಟಿ ಪರಿಹಾರವನ್ನು ನೀಡಲಾಗಿದೆ , ಉಳಿದ ಪ್ರಕರಣಗಳಲ್ಲಿ ಶೀಘ್ರವಾಗಿ ಪರಿಹಾರವನ್ನು ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸರಕಾರದ ಅಭಿವೃಧ್ದಿ ಕಾರ್ಯಗಳು ಸೇರಿದಂತೆ ಖಾಸಗಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಮರಳಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಮಳೆ ಪ್ರಮಾಣ ಕಡಿಮೆ ಆಗಿರುವ ಹಿನ್ನಲೆ ಮರಳಿನ ಬ್ಲಾಕ್ ಗಳನ್ನು ಗುರುತಿಸುವುದರೊಂದಿಗೆ ನಿಯಮಾನುಸಾರ ಮರಳು ತೆಗೆಯಲು ಅನುಮತಿ ನೀಡಬೇಕೆಂದು ಸೂಚನೆ ನೀಡಿದರು.

ಗ್ರಾಮ ಸೇವಕರು ಹಾಗೂ ಗ್ರಾಮ ಲೆಕ್ಕಿಗರು ಗ್ರಾಮ ವ್ಯಾಪ್ತಿಗಳಲ್ಲಿ ಸರ್ವೆ ನಂಬರ್ ಅನ್ವಯ ಬೆಳೆಗಳ ನಿಖರ ಮಾಹಿತಿಯನ್ನು ಹೊಂದಿರಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.