ಕರಾವಳಿ

ಶಿವಮೊಗ್ಗದಲ್ಲಿ ಕಚ್ಚಾ ಬಾಂಬ್‌ ಸ್ಫೋಟಗೊಂಡು 9 ಮಂದಿಗೆ ಗಾಯ

Pinterest LinkedIn Tumblr

ಶಿವಮೊಗ್ಗ: ಹಂದಿ ಬೇಟೆಗೆ ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡು 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಸಮೀಪದ ಕುಂಚೇನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ತಮಿಳ್‌ ಕುಮಾರ್‌ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.

(ಸಾಂದರ್ಬಿಕ ಚಿತ್ರ)

ಕಾಡುಹಂದಿ ಬೇಟೆಯಾಡಲು ನಾಡಬಾಂಬ್‌ ಅನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಅದನ್ನು ಬಿಸಿಲಿಗೆ ಒಣಗಿಸಲು ಹಾಕಿದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

 

Comments are closed.