ಕರಾವಳಿ

ಮಾರಣಕಟ್ಟೆ ಸಮೀಪದ ಚಿತ್ತೂರಿನಲ್ಲಿ ರಸ್ತೆ ಅಪಘಾತ; ಗಾಯಾಳು ಬೈಕ್ ಸವಾರ ಸಾವು

Pinterest LinkedIn Tumblr

ಕುಂದಾಪುರ: ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ತೂರು-ಮಾರಣಕಟ್ಟೆ ರಸ್ತೆಯಲ್ಲಿ ಕಾರು ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಿತ್ತೂರು ನಡುಮನೆ ಶಂಕರ ಶೆಟ್ಟಿ (44) ಮೃತಪಟ್ಟವರು. ಚಿತ್ತೂರಿನಲ್ಲಿ ಉದ್ಯಮ ನಡೆಸುತ್ತಿದ್ದ ಶಂಕರ ಶೆಟ್ಟಿ ಬೈಕಿನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದಿತ್ತು. ತಕ್ಷಣ ಅವರ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಮೃತರು ತಂದೆ, ತಾಯಿ,ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

 

 

 

 

Comments are closed.