ಕರಾವಳಿ

ಮಳೆಯಿಲ್ಲದ ದಿನಗಳಲ್ಲಿ ಆಗುಂಬೆ ಘಾಟಿ ವಾಹನ ಸಂಚಾರಕ್ಕೆ ಮುಕ್ತ

Pinterest LinkedIn Tumblr

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇದರ ತೀರ್ಥಹಳ್ಳಿ-ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯ ಮಾರ್ಗದಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಭಾರಿ ಹಾಗೂ ಸತತ ಮಳೆಯಾಗುವ ದಿನಗಳಂದು 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶಿಸಲಾಗಿದೆ.

ಪರ್ಯಾಯ ಮಾರ್ಗವಾದ ಉಡುಪಿ-ಬ್ರಹ್ಮಾವರ-ಬಾರ್ಕೂರು-ಶಂಕರನಾರಾಯಣ-ಸಿದ್ಧಾಪುರ-ಹೊಸಗಂಡಿ-ಹುಲಿಕಲ್ ಘಾಟಿ-ಹೊಸನಗರ-ತೀರ್ಥಹಳ್ಳಿ ಹಾಗೂ ಉಡುಪಿ-ಕಾರ್ಕಳ-ಬಜಗೋಳಿ-ಎಸ್.ಕೆ ಬಾರ್ಡರ್-ಕೆರೆಕಟ್ಟೆ-ಶೃಂಗೇರಿ-ಶಿವಮೊಗ್ಗ ಮೂಲಕ ಸಂಚರಿಸುವಂತೆ ಹಾಗೂ ಭಾರಿ ಮಳೆ ಇಲ್ಲದಿರುವ ದಿನಗಳಲ್ಲಿ ಎಲ್ಲಾ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Comments are closed.