ಕರಾವಳಿ

ಸಿ.ಪಿ. ಯೋಗೀಶ್ವರ್‌ಗೆ ಸಚಿವ ಸ್ಥಾನದ ವಿಚಾರದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್ ಹೇಳಿದ್ದೇನು?

Pinterest LinkedIn Tumblr

ಉಡುಪಿ: ಸಿ.ಪಿ. ಯೋಗೀಶ್ವರ್‌ಗೆ ಸಚಿವ ಸ್ಥಾನ ನೀಡುವ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ್ ಯೋಗೀಶ್ವರ್ ಪರ ಬ್ಯಾಟ್ ಬೀಸಿದ್ದಾರೆ.

ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಒತ್ತಾಯ ಇದೆ. ಪಕ್ಷದ ವ್ಯಾಪ್ತಿಯಲ್ಲಿ ಜವಾಬ್ದಾರಿಯುತವಾಗಿ‌ ಕಾರ್ಯನಿರ್ವಹಿಸಿದ್ದಾರೆ. ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎನ್ನುವುದು ನಮ್ಮ ಅಭಿಪ್ರಾಯವಾಗಿದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಳ್ಳಲು ವೇಳೆ ಅವರು ಮಾಧ್ಯಮಕ್ಕೆ ಸಚಿವ ಸಂಪುಟ ವಿಸ್ತರಣೆ ವಿಚಾದಲ್ಲಿ ಮಾತನಾಡಿದರು.

ಕೇಂದ್ರದ ವರಿಷ್ಟರು ಮತ್ತು ಸಿಎಂ ಸಮಾಲೋಚನೆ ಮಾಡುತ್ತಾರೆ. ಸಂಪುಟ ವಿಸ್ತರಣೆ ಸಾಕಷ್ಟು ಗಮನ ಸೆಳೆದಿದೆ. ವಿಸ್ತರಣೆ ಒಂದು ಜಟಿಲ ವಿಚಾರ, ಅಲ್ಪಾವಧಿಯಲ್ಲಿ ಎಲ್ಲಾ ತಿಳಿಯುತ್ತದೆ. ಮೂಲ ಬಿಜೆಪಿಗರಿಗೆ ಬೇಸರ ವಿಚಾರ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕಿದ್ದು ಜೊತೆಗೆ ಸರ್ಕಾರ ರಚನೆಗೆ ಕಾರಣೀಕರ್ತರಾದವರಿಗೆ ನೋವಾಗಬಾರದು. ಪಕ್ಷದಲ್ಲಿ ಎಲ್ಲರನ್ನೂ ಒಂದೇ ಕುಟುಂಬದಂತೆ ನೋಡಬೇಕಾಗುತ್ತೆ. ಬಿಜೆಪಿಯಲ್ಲಿ ತಾರತಮ್ಯಕ್ಕೆ ಅವಕಾಶವಿಲ್ಲ ಎಂದು ಹೇಳಿದರು.

 

Comments are closed.