ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಡಿಸೆಂಬರ್ 5 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ್ಯತೆ ತೋರಿದ್ದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.