ಕರಾವಳಿ

ಉಡುಪಿಯ ವಂಡಾರಿನಲ್ಲಿ ಸಿಡಿಲು ಬಡಿದು ಸಾಪ್ಟ್’ವೆರ್ ಇಂಜಿನಿಯರ್ ಯುವಕ ಸಾವು

Pinterest LinkedIn Tumblr

ಉಡುಪಿ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಬ್ರಹ್ಮಾವರದ ವಂಡಾರಿನ ಬೋರ್ಡಕಲ್ಲಿನ ನಿವಾಸಿ ಚೇತನ್ (24) ಮೃತ ಯುವಕ.

ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಮನೆಯಲ್ಲೇ ಚೇತನ್ ಲ್ಯಾಪ್ ಟಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸಿಡಿಲು ಬಡಿದು ಗಂಭೀರವಾಗಿ ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಚೇತನ್ ಮೃತಪಟ್ಟಿದ್ದರು ಎನ್ನಲಾಗಿದೆ.
ಬೆಂಗಳೂರಿನ ಸಾಫ್ಟ್ ವೇರ್ ಕಂಪೆನಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿದ್ದ ಚೇತನ್ ಕೊರೊನಾ ಲಾಕ್ಡೌನ್ ಹಿನ್ನೆಲೆ ಹಲವು ತಿಂಗಳಿಂದ ವರ್ಕ್ ಫ್ರಂ ಹೋಂ ಇದ್ದನಕಾರಣ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

Comments are closed.