ಉಡುಪಿ: ಮುಂದಿನ ಎರಡು ದಿನದಲ್ಲಿ ಖಾತೆ ಹಂಚಿಕೆ ಮಾಡುತ್ತೇವೆ. ವಿಧಾನ ಮಂಡಲ ಅಧಿವೇಶನ ಶುರುವಾಗುತ್ತದೆ.ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತದೆ. ಹಣಕಾಸಿನ ಇತಿಮಿತಿಯಲ್ಲಿ ಬಜೆಟ್ ಘೋಷಣೆ ಮಾಡಬೇಕಾಗಿದೆ.ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಉಡುಪಿ ಜಿಲ್ಲೆ ಕುಂದಾಪುರದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಭೇಟಿಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಎರಡು ದಿನ ಉಡುಪಿಯಲ್ಲಿ ಧಾರ್ಮಿಕ ಪ್ರವಾಸ ಮಾಡಿದ್ದು ಸಕಾಲಕ್ಕೆ ಮಳೆ ಬೆಳೆಯಾಗಲಿ, ರಾಜ್ಯಕ್ಕೆ ಸಮೃದ್ಧಿ ಯಾಗಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.
ಸಚಿವ ಸ್ಥಾನ ಆಕಾಂಕ್ಷಿ ರೇಣುಕಾಚಾರ್ಯ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದೇನೆ. ಯಾವುದೇ ಗೊಂದಲದ ವಾತಾವರಣ ಇಲ್ಲ. ಇವತ್ತು ರೇಣುಕಾಚಾರ್ಯ ಬಂದು ನನ್ನನ್ನು ಭೇಟಿ ಮಾಡುತ್ತಾರೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
Comments are closed.