ಉಡುಪಿ: ಗಣರಾಜ್ಯೋತ್ಸವ ದಿನದಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ರಾಜ್ಯ ಸರಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಧ್ವಜಾರೋಹಣ ಮಾಡಲಿದ್ದು, ಇತ್ತೀಚೆಗೆ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಸುಳ್ಯ ಶಾಸಕ ಹಾಗೂ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣಗೈಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Comments are closed.