ಕರಾವಳಿ

ಜ. 31ಕ್ಕೆ ಉಡುಪಿ ಜಿಲ್ಲೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರವಾಸ

Pinterest LinkedIn Tumblr

ಉಡುಪಿ: ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಜನವರಿ 31 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠ ಭೇಟಿ, 11 ಕ್ಕೆ ಉಡುಪಿಯಲ್ಲಿ ಕ.ರಾ.ರ.ಸಾ.ನಿಗಮದ ವತಿಯಿಂದ ನೂತನವಾಗಿ ನಿರ್ಮಿಸಿರುವ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ, ಮಧ್ಯಾಹ್ನ 12 ಗಂಟೆಗೆ ಸ್ಥಳೀಯ ಕಾರ್ಯಕ್ರಮ, 3 ಗಂಟೆಗೆ ಉಡುಪಿ ಪರಿವೀಕ್ಷಣಾ ಮಂದಿರದಲ್ಲಿ ಮಂಗಳೂರು ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.