ಕರಾವಳಿ

‘ನನ್ನ ಸಾವಿಗೆ ನಾನೇ ಕಾರಣ’- ಡೆತ್ ನೋಟ್ ಬರೆದಿಟ್ಟು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆಯ ಗಂಗೊಳ್ಳಿ‌ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರೋನಾ ಲಾಕ್ ಡೌನ್ ನಂತರ ವರ್ಕ್ ಫ್ರಮ್ ಹೋಂನಲ್ಲಿದ್ದ ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು‌ ಈ ಘಟನೆ ಗಂಗೊಳ್ಳಿ‌ ಸಮೀಪದ ಗುಜ್ಜಾಡಿ ಎಂಬಲ್ಲಿ ನಡೆದಿದೆ.

ಗುಜ್ಜಾಡಿ ನಾಯಕವಾಡಿ ಹೊಸಮನೆ ನಿವಾಸಿ ಸಚಿನ್ (24) ಆತ್ಮಹತ್ಯೆಗೆ ಶರಣಾದ ಯುವಕ.

ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಚಿನ್,2020 ನೇ ಏಪ್ರಿಲ್ ನಿಂದ ಊರಿಗೆ ಬಂದು Work from home ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.‌ ಆದರೆ ಆ ಕಂಪೆನಿ‌ಸಂಬಳ ಸಾಕಾಗದೇ ಇತ್ತೀಚೆಗೆ ಬೇಸರದಲ್ಲಿದ್ದ ಸಚಿನ್,

ಕೆಲವು ಬ್ಯಾಂಕ್ ಗಳಲ್ಲಿ ಹಾಗೂ ಕೆಲವರಲ್ಲಿ ಕೈ ಸಾಲ ಮಾಡಿಕೊಂಡಿದ್ದ. ಪಡೆದುಕೊಂಡ ಸಾಲ ತೀರಿಸಲಾಗದೇ ಮಾನಸಿಕವಾಗಿ ನೊಂದುಕೊಂಡಿದ್ದ ಸಚಿನ್ ಸಾಲದ ಸಮಸ್ಯೆಯಿಂದ ಬೇಸರಗೊಂಡು ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಂದಾಪುರ ಅಗ್ನಿ ಶಾಮಕ‌ದಳದವರು ಮೃತ ದೇಹ ಮೇಲಕ್ಕೆತ್ತುವಲ್ಲಿ ಸಹಕರಿಸಿದರು.

ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಪಿಎಸ್ಐ ಭೀಮಾಶಂಕರ್ ಭೇಟಿ ನೀಡಿದ್ದಾರೆ. ಸಚಿನ್ ತಾಯಿ‌ ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.