ಉಡುಪಿ: ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಕೋಟತಟ್ಟು ಪಡುಕರೆ ನಿವಾಸಿ ಚೆನ್ನಯ್ಯ ಪೂಜಾರಿ (51) ಆತ್ಮಹತ್ಯಗೆ ಶರಣಾದವರು. ಪಡುಕರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ಇರಿಸಿಕೊಂಡು ಜೀವನ ಸಾಗಿಸುತ್ತಿದ್ದ ಚೆನ್ನಯ್ಯ ಪೂಜಾರಿ ಇಂದು ಮುಂಜಾನೆ ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನಯ್ಯ ಪೂಜಾರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Comments are closed.