ಕರಾವಳಿ

ಸೌಕೂರಿನಲ್ಲಿ ಹಾಡುಹಗಲೇ ಬಾವಿಗೆ ಬಿದ್ದ ಚಿರತೆ: ರಕ್ಷಿಸಿದ ಅರಣ್ಯ ಇಲಾಖೆ

Pinterest LinkedIn Tumblr

ಕುಂದಾಪುರ: ಆಹಾರವರಸಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ದೇವಸ್ಥಾನ ಸಮೀಪದ‌ ನಿವಾಸಿಯೊಬ್ಬರ ಮನೆಯ ಬಾವಿಗೆ ಚಿರತೆ‌ ಬಿದ್ದಿದೆ. ತಕ್ಷಣ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಹಾಗೂ ನೇರಳಕಟ್ಟೆಯ ಅಧಿಕಾರಿ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬಂದಿದ್ದರು. ಮೊದಲಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಿದ್ದು ಬಳಿಕ ಬೋನನ್ನು ಇಳಿಸಿ‌ಚಿರತೆ ಅದರೊಳಕ್ಕೆ ಹೋದ ನಂತರ ನಾಜೂಕಾಗಿ ಮೇಲಕ್ಕೆತ್ತಿ ರಕ್ಷಣೆ ಮಾಡಲಾಯಿತು.

ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು ಆರೋಗ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹಾಗೂ ಇತರ ಅಧಿಕಾರಿ ಸಿಬ್ಬಂದಿಗಳು‌ ಕಾರ್ಯಾಚರಣೆಯಲ್ಲಿದ್ದರು.

Comments are closed.