ಕರಾವಳಿ

ಉಡುಪಿ ಒಳಕಾಡು ಪ್ರದೇಶದಲ್ಲಿ ವಲಸೆ ಕಾರ್ಮಿಕರಲ್ಲಿ ಕಾಣಿಸಿಕೊಂಡ ಕೋವಿಡ್: ಶಾಸಕರಿಂದ ತುರ್ತು ಸಭೆ

Pinterest LinkedIn Tumblr

ಉಡುಪಿ: ಉಡುಪಿ ಕುಂಜಿಬೆಟ್ಟು ಮತ್ತು ಒಳಕಾಡು ವಾರ್ಡ್ ಗಳ ಕೋವಿಡ್ ವಾರ್ ರೂಮ್ ಗೆ ಶಾಸಕ ಕೆ. ರಘುಪತಿ ಭಟ್ ಅವರು ಭೇಟಿ ನೀಡಿ ಕೋವಿಡ್ – 19 ನಿಯಂತ್ರಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಒಳಕಾಡು ಭಾಗದ ವಲಸೆ ಕಾರ್ಮಿಕರ ಗುಡಿಸಲಿನಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸೋಂಕು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹಾಗೂ ಕೋವಿಡ್ ಸೋಂಕಿತರು ಮತ್ತು ಅವರ ಸಂಪರ್ಕದಲ್ಲಿರುವವರ ಮೇಲೆ ನಿಗಾವಹಿಸಿ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಒಳಕಾಡು ವಾರ್ಡ್ ಸದಸ್ಯರಾದ ಶ್ರೀಮತಿ ರಜನಿ ಹೆಬ್ಬಾರ್, ಕುಂಜಿಬೆಟ್ಟು ವಾರ್ಡ್ ಸದಸ್ಯರಾದ ಗಿರೀಶ್ ಅಂಚನ್, ತಾಲೂಕು ಆರೋಗ್ಯಾಧಿಕಾರಿ ವಾಸುದೇವ ಉಪಾಧ್ಯಾಯ, ಉಡುಪಿ ನಗರ ಠಾಣೆ ನಿರೀಕ್ಷಕರಾದ ಪ್ರಮೋದ್ ಕುಮಾರ್ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Comments are closed.