ಉಡುಪಿ: ಜಿಲ್ಲೆಯಲ್ಲಿ ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿ ಕಚೇರಿ ತೆರೆಯಲು ಉಡುಪಿ ಡಿಸಿ ಜಿ. ಜಗದೀಶ್ ಅನುಮತಿ ನೀಡಿದ್ದಾರೆ.
ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಜಿಲ್ಲಾ ನೋಂದಣಾಧಿಕಾರಿ ಮತ್ತು ಉಪ-ನೋಂದಣಾಧಿಕಾರಿ ಕಚೇರಿಗಳು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
Comments are closed.