ಕರಾವಳಿ

ನಾಳೆ‌ (ಆ.7) ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

Pinterest LinkedIn Tumblr

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​​ಎಸ್​ಎಲ್​ಸಿ ಫಲಿತಾಂಶವನ್ನು ಆಗಸ್ಟ್ 7ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

ಎಸ್​​ಎಸ್​ಎಲ್​ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಇನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಗುರುವಾರ ಫಲಿತಾಂಶ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಜೊತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.

Comments are closed.