ಕುಂದಾಪುರ: ಕರೋನಾ ಹಿನ್ನೆಲೆಯಲ್ಲಿ ಸಾಲಬಾಧೆಯಿಂದ ಉದ್ಯಮದಲ್ಲಿ ಆದ ನಷ್ಟದಿಂದ ಬೇಸತ್ತು ಕಾಳಾವರ ಗ್ರಾಮ ಶಾಲೆ ಬಳಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಗಾಣಿಗ (42) ಎಂಬವರು ಮನೆಯ ಸಮೀಪದ ಹಾಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
(ಸಾಂದರ್ಭಿಕ ಚಿತ್ರ)
ರಾಘವೇಂದ್ರ ಗಾಣಿಗ ಬುಧವಾರ ಪತ್ನಿ ಸುಜಾತಾ ಬಳಿ ಉಡುಪಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು ಸಂಜೆ ಪತ್ನಿ ಪೋನ್ ಮಾಡಿ ವಿಚಾರಿಸಿದಾಗ ಹೋಟೆಲ್ ಬಾಗಿಲು ಹಾಕಿ ರಿಕ್ಷಾ ಮಾಡಿಕೊಂಡು ಮನೆಗೆ ಹೋಗು ಬರೋದು ತಡವಾಗುತ್ತದೆ ಎಂದು ಪೋನ್ ಕಟ್ ಮಾಡಿದ್ದರು. ರಾತ್ರಿ ಪತ್ನಿ ಮತ್ತೆ ಫೋನ್ ಮಾಡಿದಾಗ ಮೊಬೈಲ್ ಚಾಲನೆಯಲ್ಲಿ ಇರಲಿಲ್ಲ. ಪತ್ನಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದ ಆತ್ಮಹತ್ಯೆ ಪತ್ತೆಯಾಗಿದ್ದಾರೆ.
ಈ ಬಗ್ಗೆ ಕಂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.