ಕರಾವಳಿ

ಹಾಸ್ಟೆಲ್ ಸಮಸ್ಯೆ ಪರಿಹಾರ, ಬಸ್ ವ್ಯವಸ್ಥೆ, ಸ್ಕಾಲರ್ ಶಿಪ್‌ ಬಿಡುಗಡೆಗೊಳಿಸಲು ಎಬಿವಿಪಿಯಿಂದ ಮನವಿ

Pinterest LinkedIn Tumblr

ಕುಂದಾಪುರ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ಇದರ ವತಿಯಿಂದ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಗ್ರಾಮೀಣ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕು, ಹಾಸ್ಟಲ್‌ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ಇದರ ವತಿಯಿಂದ ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಬಿವಿಪಿಯ ಪ್ರಮುಖರಾದ ಜಯಸೂರ್ಯ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ಶೆಟ್ಟಿ , ಸುಚಿನ್, ದಿನೇಶ್, ರೋಹಿತ್, ಸಚಿನ್ ಉಪಸ್ಥಿತರಿದ್ದರು.

Comments are closed.