ಕರಾವಳಿ

ಸ್ನೇಹಿತರ ಜೊತೆ ಈಜಲು ತೆರಳಿದ್ದ ಯುವಕ‌ ನೀರುಪಾಲು

Pinterest LinkedIn Tumblr

ಕುಂದಾಪುರ: ಸೌಪರ್ಣಿಕ ನದಿಯಲ್ಲಿ ಈಜುತ್ತಿರುವ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ಯುವಕನೋರ್ವ ನೀರುಪಾಲಾದ ಘಟನೆ ಗಂಗೊಳ್ಳಿ‌ ಪೊಲೀಸ್ ಠಾಣೆ ವ್ಯಾಪ್ತಿಯ ಮೊವಾಡಿ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ.

ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ನೀರುಪಾಲಾದ ಯುವಕ.

(ಸಾಂದರ್ಭಿಕ ಚಿತ್ರ)

ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದನು. ಈ ವೇಳೆ ನೀರಿನ ಸೆಳೆತ ಜಾಸ್ತಿ ಇದ್ದುದರಿಂದ ಮಹೇಂದ್ರ ನೀರುಪಾಲಾಗಿದ್ದಾನೆ.
ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ.

ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ, ಸ್ಥಳೀಯರು ದೋಣಿ ಮೂಲಕ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Comments are closed.