ಕರಾವಳಿ

ಮಂಗಳೂರಿನಲ್ಲಿ ಮೂವರು ಮಹಿಳೆಯರ ಮೇಲೆ ದುಷ್ಕರ್ಮಿಯಿಂದ ಮಚ್ಚಿನಿಂದ ದಾಳಿ; ಒಬ್ಬರು ಗಂಭೀರ

Pinterest LinkedIn Tumblr

ಮಂಗಳೂರು: ಮೂವರು ಮಹಿಳೆಯರ ಮೇಲೆ ದುಷ್ಕರ್ಮಿಯೋರ್ವ ಮಚ್ಚಿನಿಂದ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ.

ಘಟನೆಯ ಬಳಿಕ ಕುಂದಾಪುರ ಕೋರ್ಟ್ ನಲ್ಲಿ ಪ್ಯೂನ್ (ಗುಮಾಸ್ತ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ ನವೀನ್ ಶೆಟ್ಟಿ(31) ಎಂಬಾತನನ್ನು ಬಂಧಿಸಲಾಗಿದೆ

ನಗರದ ಕರಂಗಲಪಾಡಿ ಬಳಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ ಈ ಘಟನೆ ನಡೆದಿದೆ. ನಿರ್ಮಲಾ, ರಿನಾ ರಾಯ್, ಗುಣವತಿ ಮೇಲೆ ತಲ್ವಾರ್ ದಾಳಿ ನಡೆದಿದೆ. ಈ ಪೈಕಿ ನಿರ್ಮಲಾ ಅವರ ಸ್ಥಿತಿ ಗಂಭೀರವಾಗಿದೆ. ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಪನ್ಯಾಸಕಿ ಒಬ್ಬರಿಗೆ ಗಿಫ್ಟ್ ಕೊಡಲಿದೆ ಎಂದು ಹೇಳಿ ಮಾತು ಆರಂಭಿಸಿ ನವೀನ್ ಏಕಾಏಕಿ ಚೀಲದಲ್ಲಿದ್ದ ಮಚ್ಚು ತೆಗೆದು ಸಿಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿದ್ದಾರೆ.

ಸ್ಥಳಕ್ಕೆ ಬರ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.

 

Comments are closed.