ಕರಾವಳಿ

ಉಳ್ಳಾಲದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚೂರಿ ಇರಿತ

Pinterest LinkedIn Tumblr

ಮಂಗಳೂರು: ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಗಾಯಗೊಂಡವರನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ತೊಕ್ಕೊಟ್ಟುವಿನ ಆಸ್ಪತ್ರೆಗೆ ಸೇರಿಸಿದ್ದಾರೆ.

ಮೊಗವೀರಪಟ್ನ ನಿವಾಸಿಯೊಬ್ಬನಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಈ ಹಿಂದಿನ ವೈಯಕ್ತಿಕ ದ್ವೇಷದಿಂದ ನಡೆದಿರುವ ಕೃತ್ಯ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.

 

 

Comments are closed.