ಕರಾವಳಿ

ಮಂಗಳೂರು ಡಿಸಿಪಿ ಹರಿರಾಂ ಶಂಕರ್ ಕಾರಿನ ಮೇಲೆ ಮರಳು ಲಾರಿ ಹತ್ತಿಸಲು ಯತ್ನ; ಲಾರಿ, ಇಬ್ಬರು ವಶ

Pinterest LinkedIn Tumblr

ಮಂಗಳೂರು: ಡಿಸಿಪಿ ಕಾರಿನ ಮೇಲೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ನಡೆದಿದ್ದು, ಚಾಲಕ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್​ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್​ ಪೋಸ್ಟ್​ ಬಳಿ ಲಾರಿ ಅಡ್ಡಗಟ್ಟಿದ್ದರು.
ತಪ್ಪಿಸಿಕೊಂಡಿದ್ದ ಪರಾರಿಯಾಗಿದ್ದ.

ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು.

ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.

ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Comments are closed.