ಕರಾವಳಿ

ಕಾರ್ಕಳದಲ್ಲಿ ಸಿಡಿಲು ಬಡಿದು 60 ವರ್ಷದ ವ್ಯಕ್ತಿ ಸಾವು

Pinterest LinkedIn Tumblr

ಉಡುಪಿ: ಇಲ್ಲಿನ ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ 4 ಗಂಟೆಯ ವೇಳೆಗೆ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟ ದುರ್ದೈವಿ.

(ಸಾಂದರ್ಭಿಕ ಚಿತ್ರ)

ಸಿಡಿಲಿನ ಹೊಡೆತಕ್ಕೆ ಇವರು ವಾಸವಾಗಿದ್ದ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಕರಗಲಾಗಿದ್ದು ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ. ಸಿಡಿಲಿನ ಅಘಾತದಿಂದ ನೆಲದಲ್ಲಿ ಬಿದ್ದ ವಾದಿರಾಜ ಆಚಾರ್ಯ ಅವರನ್ನು ಬೈಲೂರಿನ ಆಸ್ಪತ್ರೆಯೊಂದಲ್ಲಿ ಚಿಕಿತ್ಸೆ ನೀಡಲು ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.