ಕರ್ನಾಟಕ

ಗಣೇಶ ಮೂರ್ತಿ ವಿಸರ್ಜನೆ ವೇಳೆ ಅವಘಡ: ವಿದ್ಯುತ್ ಸ್ಪರ್ಶಕ್ಕೆ ಐವರು ಯುವಕರು ಬಲಿ

Pinterest LinkedIn Tumblr

tracter

ಬೆಂಗಳೂರು, ಸೆ.14: ಗಣೇಶ ಮೂರ್ತಿ ವಿಸರ್ಜನೆ ಮಾಡಿ ಟ್ರಾಕ್ಟರ್‌ನಲ್ಲಿ ಹಿಂದಿ ರುಗುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಐದು ಮಂದಿ ಯುವಕರು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕ ಮಧುರೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಚಿಕ್ಕ ಮಧುರೆ ಗ್ರಾಮದ ಟ್ರಾಕ್ಟರ್ ಚಾಲಕ ಆಂಜಿನಪ್ಪ (28), ರಾಜು (22), ದರ್ಶನ್ (22), ನಾಗೇಶ್ (25) ಹಾಗೂ ಅಂಜನ್ (22) ಎಂಬವರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಇದೇ ಘಟನೆಯಲ್ಲಿ ಮೂರು ಮಂದಿ ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡಿದ್ದು ಬಾಗಲಗುಂಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಹೇಳಲಾಗಿದೆ.

ಚಿಕ್ಕಮಧುರೆ ಗ್ರಾಮದ ಯುವಕರು ಏಕದಂತ ಗೆಳೆಯದ ಬಳಗವೆಂಬ ಸಂಘವನ್ನು ಸ್ಥಾಪಿಸಿಕೊಂಡು ಪ್ರತಿವರ್ಷ ಗಣೇಶ ಮೂರ್ತಿ ಪ್ರತಿಷ್ಠಾಪಿಸುತ್ತಿದ್ದರು. ನಿನ್ನೆ ರಾತ್ರಿ 12:15ರ ಸುಮಾರಿಗೆ ಬಳಗದಿಂದ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ವಿಸರ್ಜಿಸಿ ಹಿಂದಿರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ಪ್ರಕರಣ ಸಂಬಂಧ ದೊಡ್ಡ ಬೆಳವಂಗಲ ಠಾಣಾ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Write A Comment