ತುಮಕೂರು, ಸೆ.17: ಕಾಲೇಜು ವಿದ್ಯಾರ್ಥಿನಿ ಹಾಗೂ ಎಎಪಿ ಕಾರ್ಯಕರ್ತೆಗೆ ಜಿಲ್ಲಾಧಿಕಾರಿ ಕಚೇರಿಯ ಆರ್ಎಚ್ಎಂ (ಉಪತಹಶೀಲ್ದಾರ್) ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇಲ್ಲಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯೂ ಆಗಿರುವ ಯುವತಿ ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಬಸ್ನಲ್ಲಿ ಹೋಗುತ್ತಿದ್ದಳು. ಈವೇಳೆ ನೆಲಮಂಗಲದಲ್ಲಿ ಬಸ್ ಹತ್ತಿದ ಉಪ ತಹಶೀಲ್ದಾರ್ ಮುರಳಿ(41) ಎಂಬಾತ ಈಕೆಯ ಪಕ್ಕದಲ್ಲಿ ಕುಳಿತು ಅನುಚಿತ ವರ್ತನೆ ತೋರುತ್ತಿದ್ದ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಈ ಬಗ್ಗೆ ಯುವತಿ ಹೊಸಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಆರೋಪಿಯನ್ನು ನ್ಯಾಯಾಲಯ ಬಂಧನಕ್ಕೆ ವಶಪಡಿಸಿಕೊಳ್ಳಲಾಗಿದೆ.