ಬಳ್ಳಾರಿ, ನ.23: ಬೀದಿನಾಯಿಗಳ ದಾಳಿಗೆ ವ್ಯಕ್ತಿಯೊಬ್ಬ ಬಲಿಯಾಗಿರುವ ದಾರುಣ ಘಟನೆ ಸಿರಗುಪ್ಪ ಪಟ್ಟಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಇಮಾಮ್ಸಾಬ್ (೫೮) ಬೀದಿ ನಾಯಿಗಳ ದಾಳಿಗೆ ಬಲಿಯಾದ ದುರ್ದೈವಿ. ಈತನ ಮನೆಯವರೆಲ್ಲ ಸಂಬಂಧಿಕರ ಮನೆಗೆ ಹೋಗಿದ್ದರು. ಹಾಗಾಗಿ ಮನೆಯಲ್ಲಿ ಇವನೊಬ್ಬನೇ ಮಲಗಿದ್ದನು.
ಇಂದು ಬೆಳಗಿನ ಜಾವ ಐದು ಗಂಟೆ ಸಮಯದಲ್ಲಿ ಮಾತ್ರ ವಿಸರ್ಜನೆಗೆಂದು ಮನೆಯ ಹೊರಗೆ ಬಂದು ಮತ್ತೆ ಒಳಗೆ ಹೋದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದು ದಾಳಿ ಮಾಡಿವೆ. ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲಾಗಿದೆ. ತೀವ್ರವಾಗಿ ಗಾಯಗೊಂಡ ಇಮಾಮ್ಸಾಬ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಸ್ಥಳೀಯರು ಸಿರಗುಪ್ಪ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತನ ಮನೆಯವರಿಗೆ ವಿಷಯ ತಿಳಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.