ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಇರ್ಫಾನ್,ಶೇಖ್ ಮೋಬಿನ, ರೆಹಮಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ನಾಡಪಿಸ್ತೂಲ್, ಮಾರಕಾಸ್ತ್ರ ಹಾಗು ಟವೇರಾ ವಾಹನವನ್ನು ವಶಪಡಿಸಿಕೋಳ್ಳಲಾಗಿದೆ. ಈ ಕೊಲೆಗೆ ಕಲಬುರಗಿ ಜೈಲಿನಲ್ಲಿರುವ ಶಂಶೀರ್ ಮಾಸ್ಟರ್ ಮೈಂಡ್ ಎಂದು ಪೊಲೀಸ್ ತನಿಖಾ ವೇಳೆ ತಿಳಿದು ಬಂದಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಎಸ್ಪಿ ಅಮಿತ್ ಸಿಂಗ್ ಹೇಳಿದ್ದಾರೆ.
ಮಂಗಳವಾರ ಬೆಳಗ್ಗೆ ಟವೇರಾ ವಾಹನದಲ್ಲಿ ಬಂದಿದ್ದ 5ಕ್ಕೂ ಹೆಚ್ಚು ದುಷ್ಕರ್ಮಿಗಳು ನಗರದ ರೇಡಿಯೋ ಸ್ಟೇಷನ್ ಬಳಿ ಶಬ್ಬೀರ್ ಹಾಗೂ ಅವರ ಸ್ನೇಹಿತರು ತೆರಳುತ್ತಿದ್ದ ಮೂರು ಬೈಕ್ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಶಬ್ಬೀರ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ನಡೆಸಿದ್ದರು.