ಕರ್ನಾಟಕ

ಕುರುಬರೆಲ್ಲಾ ನನ್ನ ಸಂಬಂಧಿಕರಲ್ಲ, ಯಾರನ್ನೂ ರಕ್ಷಿಸಿಲ್ಲ:ಸಿಎಂ ಸಿದ್ದು

Pinterest LinkedIn Tumblr

siddaramaiah_karnatka-CM

ಬೆಂಗಳೂರು: ಸಿದ್ದರಾಮಯ್ಯ ಸಿದ್ದರಾಮಯ್ಯನೇ ಕುಮಾರಸ್ವಾಮಿ ಅಲ್ಲ. ಜಾತಿ ಹೆಸರಿನಲ್ಲಿ ಯಾರನ್ನೂ ರಕ್ಷಣೆ ಮಾಡಿಲ್ಲ. ಕುರುಬರೆಲ್ಲಾ ಸಿದ್ದರಾಮಯ್ಯನ ಸಂಬಂಧಿಕರಲ್ಲ. ತಪ್ಪು ಮಾಡಿದ್ದರೆ ನನ್ನ ಅಜ್ಜನನ್ನೂ ಬಂಧಿಸದೇ ಬಿಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿನ ಒಂದಂಕಿ ಲಾಟರಿ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಒಂದಂಕಿ ಲಾಟರಿ ಹಗರಣದಲ್ಲಿ ಸಿದ್ದರಾಮಯ್ಯನವರು ಚಂದ್ರಕಾಂತ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಅವರು ಕುರುಬರಾಗಿದ್ದರಿಂದ ಹಾಗೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಅಲ್ಲದೇ ಪ್ರಕರಣ ಇಷ್ಟು ಗಂಭೀರವಾಗಿದ್ದರು, ಸಿದ್ದರಾಮಯ್ಯ ದನ ಮೇಯಿಸುತ್ತಿದ್ರಾ ಎಂದು ಪ್ರಶ್ನಿಸಿದ್ದರು.

ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಸಂಪೂರ್ಣ ವರದಿ ಬಂದ ಮೇಲೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಆದರೆ ಕುಮಾರಸ್ವಾಮಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ದನಮೇಯಿಸುವುದು ಕುಮಾರಸ್ವಾಮಿ ಸಂಸ್ಕೃತಿ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಚಂದ್ರಕಾಂತ್ ಯಾರು ಅಂತ ನನಗೆ ಗೊತ್ತಿಲ್ಲ. ತಪ್ಪು ಯಾರೇ ಮಾಡಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಎಂದರು.

ಲಾಟರಿ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ವರದಿ ಕೇಳಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
-ಉದಯವಾಣಿ

Write A Comment