ಕರ್ನಾಟಕ

ಎಚ್.ಡಿ. ಕುಮಾರಸ್ವಾಮಿಗೆ ಮಧ್ಯಂತರ ನಿರೀಕ್ಷಣಾ ಬೇಲ್: ಏನಿದು ಪ್ರಕರಣ

Pinterest LinkedIn Tumblr

KUMARASWAMY

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಗುರುವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಏನಿದು ಪ್ರಕರಣ:
ಎಚ್.ಡಿ.ಕುಮಾರಸ್ವಾಮಿ ತನ್ನ ಅತ್ತೆ ಹೆಸರಿಗೆ ಡಿನೋಟಿಫೈ ಮಾಡಿದ್ದ ಪ್ರಕರಣ ಇದಾಗಿದೆ. 2010ರಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರು ಏರ್ ಫೋರ್ಟ್ ರಸ್ತೆಯಲ್ಲಿರುವ ಗಂಗೇನಹಳ್ಳಿಯಲ್ಲಿರುವ 1 ಎಕರೆ 11ಗುಂಟೆ ಜಾಗವನ್ನು ಕುಮಾರಸ್ವಾಮಿ ಅತ್ತೆ ವಿಮಲಾ ಹೆಸರಿಗೆ ಡಿನೋಟಿಫೈ ಮಾಡಿಸಿದ್ದರು ಎಂದು ದೂರಿ ಜಯಕುಮಾರ್ ಹಿರೇಮಠ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಏತನ್ಮಧ್ಯೆ, ತನಗೆ ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿ ಕುಮಾರಸ್ವಾಮಿ ಲೋಕಾಯುಕ್ತ ಕೋರ್ಟ್ ಮೆಟ್ಟಿಲೇರಿದ್ದರು.
-ಉದಯವಾಣಿ

Write A Comment