ಹಿರಿಯೂರು: ಬೆಂಗಳೂರಿಗೆ ಬರುತ್ತಿದ್ದ ಐರಾವತ ಬಸ್ ಹಿರಿಯೂರು ಬಳಿ ಟ್ರಾಕ್ಟರ್ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದ್ದು, ಅಪಘಾತದಲ್ಲಿ ಟ್ರಾಕ್ಟರ್ ಚಾಲಕ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಟ್ರಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಿರಡಿಯಿಂದ – ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿಯ ಐರಾವತ ಬಸ್ ಹಿರಿಯೂರಿನ ಜವಗೊಂಡನಹಳ್ಳಿ ಔಟ್ಪೋಸ್ಟ್ ಬಳಿ ಟ್ರಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಬಸ್ ಲಾರಿಯನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಟ್ರಾಕ್ಟರ್ಗೆ ಡಿಕ್ಕಿ ಹೊಡಿದಿದೆ. ಟ್ರಾಕ್ಟರ್ಗೆ ಡಿಕ್ಕಿಯಾದ ನಂತರ ಬಸ್ ಡಿವೈಡರ್ ಮೇಲೆ ಹತ್ತಿ ನಿಂತಿದೆ.