ಕರ್ನಾಟಕ

ಬಾವಿಗೆ ಹಾರಿ ಮಂಡ್ಯದಲ್ಲಿ ಮತ್ತೋರ್ವ ರೈತನ ಆತ್ಮಹತ್ಯೆ

Pinterest LinkedIn Tumblr

wellಮಂಡ್ಯ: ಸಾಲ ಮಾಡಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ನೋಟಿಸ್ ಜಾರಿಗೊಳಿಸಿದ್ದರು ಎಂಬ ಕಾರಣದಿಂದ ಮನನೊಂದ ರೈತನೋರ್ವ ತನ್ನದೇ ಜಮೀನಿನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊನ್ನಾಯಕನಹಳ್ಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಶಿವಲಿಂಗೇಗೌಡ(37) ಎಂದು ಹೇಳಲಾಗಿದ್ದು, ಬಎಸ್ಬಿಐ ಬ್ಯಾಂಕ್ ನಿಂದ ಸಾಲ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ನಿಂದ ನೋಟಿಸ್ ಜಾರಿಯಾಗಿತ್ತು. ನೋಟಿಸ್ ನಲ್ಲಿ ಸಾಲ ಮರು ಪಾವತಿ ಮಾಡದಿದ್ದಲ್ಲಿ ತಮ್ಮ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಇಲ್ಲಿನ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ.

ಕಳೆದ ಒಂದುವಾರದಿಂದಷ್ಟೇ ಜಿಲ್ಲೆಯ ಪಾಂಡವಪುರ ತಾಲೂಕಿನ ಗಾಣದ ಹೊಸೂರು ನಿವಾಸಿ ನಿಂಗೇಗೌಡ(60) ಎಂಬ ರೈತ ಕೂಡ ತನ್ನದೇ ಕಬ್ಬು ಬೆಳೆಗೆ ಬೆಂಕಿ ಇಟ್ಟು, ಅದರಲ್ಲಿಯೇ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Write A Comment