ಕರ್ನಾಟಕ

ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

Pinterest LinkedIn Tumblr

6069080625_crime_scene_murder_genericಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಇಂದು ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ 38 ವರ್ಷದ ಶ್ರೀನಿವಾಸ್ ಹತ್ಯೆಯಾದವರಾಗಿದ್ದು, ತಿಂಡ್ಲು ಸಮೀಪದ ಟೆಲಿಕಾಂ ಲೇ ಔಟ್ ಬಳಿ ಶ್ರೀನಿವಾಸ್ ಇದ್ದಾಗ ಬೈಕಿನಲ್ಲಿ ಬಂದ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಮಚ್ಚು- ಲಾಂಗುಗಳಿಂದ ತೀವ್ರತರವಾದ ಹಲ್ಲೆ ನಡೆಸಿ ಪರಾರಿಯಾಗಿದೆ.

ಮಾರಣಾಂತಿಕವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಅವರನ್ನು ಕೂಡಲೇ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ ಮಾರ್ಗ ಮಧ್ಯದಲ್ಲಿ ಅವರು ಸಾವನ್ನಪ್ಪಿದ್ದಾರೆ. ಹಳೆ ವೈಷ್ಯಮ್ಯವೇ ಶ್ರೀನಿವಾಸ್ ಅವರ ಕೊಲೆಗೆ ಕಾರಣವೆಂದು ಹೇಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕೊಡಿಗೇನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Write A Comment