ಕರ್ನಾಟಕ

ಹಣಕಾಸು ವ್ಯವಹಾರದಲ್ಲಿ ನಷ್ಟ : ಒಂದೇ ಕುಟುಂಬದ 3 ಮಂದಿ ಆತ್ಮಹತ್ಯೆ

Pinterest LinkedIn Tumblr

hang

ಹಾಸನ, ಜು.6: ಒಂದೇ ಕುಟುಂಬದ ಮೂರು ಮಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ನಗರ ಸಂಗಮೇಶ್ವರ ಬಡಾವಣೆಯ ನಿವಾಸಿಗಳಾದ ಶಂಕರ್ (41), ಪತ್ನಿ ರಮ್ಯಾ (28) ಹಾಗೂ ಹೆಣ್ಣುಮಗು ಬೆಳ್ಳಿ (11) ಇವರು ಆತ್ಮಹತ್ಯೆಗೆ ಶರಣಾದ ನತದೃಷ್ಟರಾಗಿದ್ದಾರೆ.

ತನ್ನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಈ ಸಂಬಂಧ ಕೆಆರ್‌ಪುರಂ ಬಡಾವಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲಾ ಪೊಲೀಸ್ ಹೆಚ್ಚುವರಿ ಮುಖ್ಯಾಧಿಕಾರಿ ರಶ್ಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ತನಿಖೆ ನಡೆಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಅವರಿಗೆ ಆತ್ಮಹತ್ಯೆ ಮಾಡಿಕೊಂಡ ಜಯಶಂಕರ್ ದೂರವಾಣಿ ಕರೆಮಾಡಿದ್ದರೆಂದು ಹೇಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಕರೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ಇವರು ಮನೆಯನ್ನು ಪೊಲೀಸ್ ಸಿಬ್ಬಂದಿಗೆ ಹುಡುಕಲು ಪ್ರಯತ್ನಿಸುತ್ತಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಹಣಕಾಸು ವ್ಯವಹಾರದಲ್ಲಿ ನಷ್ಟ ಸಂಭವಿಸಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದ್ದು, ಸುಮಾರು 50 ಲಕ್ಷ ರೂ. ಹಣಕಾಸು ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Write A Comment