ಬೆಂಗಳೂರು,ಜು.16-ಲೋಕಾಯುಕ್ತರ ರಾಜೀನಾಮೆಗೆ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಂತೆ ಕೊಗೆಗೂ ಎಚ್ಚೆತ್ತ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು ದೀರ್ಘ ಕಾಲದ ರಜೆ ಮೇಲೆ ತೆರಳಿದ್ದಾರೆ. ತಮ್ಮ ಹುಟ್ಟೂರಾದ ಆಂಧ್ರಪ್ರದೇಶಕ್ಕೆ ತೆರಳಿರುವ ಭಾಸ್ಕರ್ರಾವ್
ಇಂದಿನಿಂದ ನಾಲ್ಕು ದಿನ ರಜೆ ಹಾಕಿದ್ದಾರೆ. ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಬೇಕು. ಆದರೆ ಹೋರಾಟಗಳು ತೀವ್ರಗೊಂಡರೆ ಮತ್ತೆ ರಜೆ ಮುಂದುವರೆಸುವುದನ್ನು ಅಲ್ಲಗಳೆಯುವಂತಿಲ್ಲ. ವಕೀಲರು, ಎ.ಟಿ.ರಾಮಸ್ವಾಮಿ ನೇತೃತ್ವದ ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆಗಿಳಿದಿದ್ದರಿಂದ ಹೋರಾಟದ ಕಾವು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಭಾಸ್ಕರ್ರಾವ್ ರಜೆ ಮೇಲೆ ಹೋಗಿದ್ದಾರೆ. ಸೋಮವಾರ ಕರ್ತವ್ಯಕ್ಕೆ ಹಾಜರಾಗುವರೇ ? ಅಥವಾ ಹೋರಾಟ ತೀವ್ರಗೊಂಡರೆ ರಜೆ ಮುಂದುವರೆಸುವರೇ ಕಾದು ನೋಡಬೇಕಿದೆ.