ಕರ್ನಾಟಕ

ಜು.19ಕ್ಕೆ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಸಿಎಂ ಭೇಟಿ

Pinterest LinkedIn Tumblr

siddu17ಬೆಂಗಳೂರು: ಕಡೆಗೂ ಸಾಲಬಾಧೆಯಿಂದ ಆತ್ಮಹತ್ಯೆ ಶರಣಾದ ರೈತರ ಮನೆಗಳಿಗೆ ಭೇಟಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದು, ಜುಲೈ 19ರಂದು ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಭಾನುವಾರ ಬೆಳಗ್ಗೆ ಮಂಡ್ಯ ತಾಲೂಕಿನ ಹೊನ್ನನಾಯಕನಹಳ್ಳಿಯಲ್ಲಿ ತನ್ನದೇ ಜಮೀನಿನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿವಲಿಂಗೇಗೌಡ ಅವರ ಮನೆಗೆ ಭೇಟಿ, ಮೃತ ರೈತರನ ಕುಟುಂಬಕ್ಕೆ ಸಿಎಂ ಸಾಂತ್ವಾನ ಹೇಳಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿಗೆ ಭೇಟಿ ನೀಡಲಿರುವ ಸಿಎಂ, ಅಲ್ಲಿ ಮೃತ ರಾಜೇಂದ್ರ ಅವರ ಮನೆಗೆ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

Write A Comment