ಕರ್ನಾಟಕ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ : ವ್ಯಾಪಕ ಆಕ್ರೋಶ

Pinterest LinkedIn Tumblr

Sangolli-24543547ಬೆಂಗಳೂರು, ಜು.18- ಮಹಾನ್ ದೇಶಭಕ್ತ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಯನ್ನು ಕಿಡಿಗೇಡಿಗಳು ಭಗ್ನಗೊಳಿಸಿ ರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಗರದ ಖೋಡೆ ವೃತ್ತದಲ್ಲಿರುವ ರಾಯಣ್ಣ ಪ್ರತಿಮೆಯ ಕೈಯಲ್ಲಿ ರುವ ಖಡ್ಗವನ್ನು ಕೆಲ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ.

ಪ್ರತಿಮೆ ಭಗ್ನ ಗೊಂಡಿರುವ ವಿಚಾರ ತಿಳಿಯುತ್ತಿ ದ್ದಂತೆ ರಾಯಣ್ಣ ಅಭಿಮಾನಿಗಳು, ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ವಾಟಾಳ್ ನಾಗರಾಜ್ ಘಟನೆಯನ್ನು ಖಂಡಿಸಿ ರುವುದೇ ಅಲ್ಲದೆ ಕೂಡಲೇ ಕಿಡಿ ಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತ ನಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ರಾಜ್ಯಾಧ್ಯಕ್ಷ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಬಿ.ಸೋಮಶೇಖರ್ ಅವರು ಮಹಾನ್ ದೇಶಭಕ್ತ ರಾಯಣ್ಣ ಅವರ ಪ್ರತಿಮೆ ಭಗ್ನಗೊಳಿಸಿರುವುದು ಖಂಡನಾರ್ಹ. ಸರ್ಕಾರ ಕೂಡಲೇ ಭಗ್ನಗೊಂಡಿ ರುವ ಪ್ರತಿಮೆಯನ್ನು ಪುನರ್ ನಿರ್ಮಿಸಬೇಕು ಹಾಗೂ ಕ್ರಾಂತಿ ವೀರನಿಗೆ ಅಪಮಾನ ಮಾಡಿ ರುವ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅದೇ ರೀತಿ ಸಂಗೊಳ್ಳಿ ರಾಯಣ್ಣ ಚಿತ್ರನಿರ್ಮಾಪಕ ಆನಂದ್ ಅಪ್ಪುಗೋಳ ಮತ್ತಿತರರು ಘಟನೆ ಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Write A Comment