ಕ್ಷುಲ್ಲಕ ಕಾರಣಕ್ಕೆ ಪತಿ ಮಹಾಶಯನೊಬ್ಬ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾದ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ.
ಇಲ್ಲಿನ ನುಕ್ಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು 30 ವರ್ಷದ ಖಾಜಾ ಸಾಬ್ ಎಂಬ ಪ್ರತಿದಿನ ಪತ್ನಿಯಾದ ಹರ್ಷಿಯಾ ಜತೆ ಜಗಳವಾಡುತ್ತಿದ್ದ. ಶನಿವಾರ ಬಿರಿಯಾನಿ ಸರಿಯಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಜಗಳವಾಡಲು ಮುಂದಾಗಿದ್ದಾನೆ. ಈ ಜಗಳ ತಾರಕಕ್ಕೇರಿದ್ದು ಈ ಸಮಯದಲ್ಲಿ ತಾಳ್ಮೆ ಕಳೆದುಕೊಂಡ ಖಾಜಾ ಸಾಬ್ ಅಲ್ಲಿಯೇ ಇದ್ದ ಚಾಕುವಿನಲ್ಲಿ ಪತ್ನಿಯ ಕತ್ತು ಕತ್ತರಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ದಂಪತಿಗಳಿಗೆ ಓರ್ವ ಗಂಡು ಇಬ್ಬರು ಹೆಣ್ಣು ಮಕ್ಕಳಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.