ಕರ್ನಾಟಕ

ಒಂಟಿ ಮಹಿಳೆ ಕೊಲೆ; ಚಿನ್ನಾಭರಣ ಲೂಟಿ

Pinterest LinkedIn Tumblr

single women

ಹಾಸನ: ಒಂಟಿ ಮಹಿಳೆ ಕೊಲೆಗೈದು, ಚಿನ್ನಾಭರಣಗಳನ್ನು ದೋಚಿದ ಘಟನೆ ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪ ಬಳಿ ನಡೆದಿದೆ. ಪುಷ್ಪಾ (62) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ.

ಘಟನೆ ತಡರಾತ್ರಿ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದ್ದು, ದರೋಡೆಕೋರರ ಮಾಹಿತಿ ಲಭಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಚಯಸ್ಥರೇ ಮಾಡಿರಬಹುದಾದ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

Write A Comment