ಕರ್ನಾಟಕ

ಕವಿವಿ ಮಣ್ಣಲ್ಲಿ ಮಣ್ಣಾದ ಎಂಎಂ ಕಲಬುರ್ಗಿ

Pinterest LinkedIn Tumblr

kalaburgiಧಾರವಾಡ: ವೈಚಾರಿಕ ನಿಲುವು, ನಿಷ್ಠುರ ಸತ್ಯದ ಪ್ರತಿಪಾದನೆಗೆ ಹೆಸರಾಗಿದ್ದ ಹಿರಿಯ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ (77ವರ್ಷ) ಅವರು ಸೋಮವಾರ ಮಧ್ಯಾಹ್ನ ಮಣ್ಣಲ್ಲಿ ಮಣ್ಣಾಗಿದ್ದಾರೆ.

ಭಾನುವಾರ ಬೆಳಗ್ಗೆ ಆಗುಂತಕರ ಗುಂಡಿಗೆ ಬಲಿಯಾಗಿದ್ದ ಎಂ.ಎಂ. ಕಲಬುರ್ಗಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಕರ್ನಾಟಕ ವಿಶ್ವವಿದ್ಯಾಲಯ(ಕವಿವಿ)ದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅಂತ್ಯಕ್ರಿಯೆ ಸ್ಥಳದಲ್ಲಿ ಹತ್ಯೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕರ್ನಾಟಕ ಕಾಲೇಜ್ ಆವರಣದಲ್ಲಿ ಅಂತಿಮ ದರ್ಶನದ ಬಳಿಕ ಮೃತದೇಹವನ್ನು ಮೆರವಣಿಗೆ ಮೂಲಕ ಕವಿವಿ ಆವರಣಕ್ಕೆ ತರಲಾಗಿತ್ತು. ಈ ವೇಳೆ ಸಾವಿರಾರು ಮಂದಿ ಕಲಬುರ್ಗಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಹಿಂದೂ ಧಾರ್ಮಿಕ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಿತು.

Write A Comment